ஒரு மொழியை தேர்ந்தெடுக

mic

பகிர்ந்து கொள்க

இணைப்பை பகிர்ந்து கொள்க

QR code for https://globalrecordings.net/script/kn/1225

unfoldingWord 25 - ಸೈತಾನನು ಯೇಸುವನ್ನು ಶೋಧಿಸಿದನು

unfoldingWord 25 - ಸೈತಾನನು ಯೇಸುವನ್ನು ಶೋಧಿಸಿದನು

சுருக்கமான வருணனை: Matthew 4:1-11; Mark 1:12-13; Luke 4:1-13

உரையின் எண்: 1225

மொழி: Kannada

சபையினர்: General

செயல்நோக்கம்: Evangelism; Teaching

Features: Bible Stories; Paraphrase Scripture

நிலை: Approved

இந்த விரிவுரைக்குறிப்பு பிறமொழிகளின் மொழிபெயர்ப்பிற்கும் மற்றும் பதிவு செய்வதற்கும் அடிப்படை வழிகாட்டி ஆகும். பல்வேறு கலாச்சாரங்களுக்கும் மொழிகளுக்கும் பொருத்தமானதாக ஒவ்வொரு பகுதியும் ஏற்ற விதத்தில் இது பயன்படுத்தப்படவேண்டும்.சில விதிமுறைகளுக்கும் கோட்பாடுகளுக்கும் ஒரு விரிவான விளக்கம் தேவைப்படலாம் அல்லது வேறுபட்ட கலாச்சாரங்களில் இவை தவிர்க்கப்படலாம்.

உரையின் எழுத்து வடிவம்

ಯೇಸು ದೀಕ್ಷಾಸ್ನಾನವನ್ನು ಮಾಡಿಸಿಕೊಂಡ ಕೂಡಲೇ, ಪವಿತ್ರಾತ್ಮನು ಆತನನ್ನು ಅಡವಿಗೆ ನಡೆಸಿದನು. ಯೇಸು ನಲವತ್ತು ದಿನ ಹಗಲಿರಳು ಅಲ್ಲಿದ್ದನು. ಆ ಸಮಯದಲ್ಲಿ ಆತನು ಉಪವಾಸ ಮಾಡಿದನು ಮತ್ತು ಸೈತಾನನು ಯೇಸುವಿನ ಬಳಿಗೆ ಬಂದು ಪಾಪಮಾಡುವಂತೆ ಆತನನ್ನು ಶೋಧಿಸಿದನು.

ಮೊದಲಿಗೆ, ಸೈತಾನನು ಯೇಸುವಿಗೆ, "ನೀನು ದೇವರ ಮಗನಾಗಿದ್ದರೆ, ಈ ಕಲ್ಲುಗಳನ್ನು ರೊಟ್ಟಿಯಾಗುವಂತೆ ಮಾಡಿ ನಿನ್ನ ಹಸಿವೆಯನ್ನು ನೀಗಿಸಿಕೋ " ಎಂದು ಹೇಳಿದನು.

ಆದರೆ ಯೇಸು ಸೈತಾನನಿಗೆ, ", ಜನರು ರೊಟ್ಟಿಯಿಂದ ಮಾತ್ರ ಬದುಕುವುದಿಲ್ಲ, ಆದರೆ ಅವರಿಗೆ ಬದುಕಲು ದೇವರು ಹೇಳುವಂಥ ಎಲ್ಲವು ಅಗತ್ಯವಾಗಿವೆ ಎಂದು ದೇವರ ವಾಕ್ಯದಲ್ಲಿ ಬರೆಯಲ್ಪಟ್ಟಿದೆ" ಎಂದು ಹೇಳಿದನು.

ಆಗ ಸೈತಾನನು ಯೇಸುವನ್ನು ದೇವಾಲಯದ ಗೋಪುರಕ್ಕೆ ಕರೆದುಕೊಂಡು ಹೋದನು. ಅವನು ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು, ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.

ಆದರೆ ಯೇಸು ಸೈತಾನನು ಮಾಡಬೇಕೆಂದು ತನ್ನನ್ನು ಕೇಳಿಕೊಂಡಿದ್ದನ್ನು ಮಾಡಲಿಲ್ಲ. ಬದಲಾಗಿ ಆತನು, "ದೇವರು ಎಲ್ಲರಿಗೂ ಹೇಳುವುದೇನಂದರೆ, ‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು'" ಎಂದು ಹೇಳಿದನು.

ಆಗ ಸೈತಾನನು ಯೇಸುವಿಗೆ ಲೋಕದ ಎಲ್ಲಾ ಸಾಮ್ರಾಜ್ಯಗಳನ್ನು ತೋರಿಸಿದನು. ಅವುಗಳು ಎಷ್ಟು ಶಕ್ತಿಶಾಲಿಯಾಗಿವೆ ಮತ್ತು ಎಷ್ಟು ಶ್ರೀಮಂತವಾಗಿವೆ ಎಂದು ಅವನು ಆತನಿಗೆ ತೋರಿಸಿದನು. ಅವನು ಯೇಸುವಿಗೆ, "ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು" ಎಂದು ಹೇಳಿದನು.

ಯೇಸು, "ಸೈತಾನನೇ ನನ್ನಿಂದ ತೊಲಗಿ ಹೋಗು!, ‘ನಿನ್ನ ದೇವರಾದ ಕರ್ತನನ್ನು ಮಾತ್ರ ಆರಾಧಿಸು, ಆತನನ್ನು ಮಾತ್ರವೇ ದೇವರೆಂದು ಗೌರವಿಸಬೇಕೆಂದು ದೇವರು ತನ್ನ ಜನರಿಗೆ ಅಜ್ಞಾಪಿಸಿದ್ದಾನೆ " ಎಂದು ಉತ್ತರಿಸಿದನು.

ಯೇಸು ಸೈತಾನನ ಶೋಧನೆಗೆ ಒಳಗಾಗಲಿಲ್ಲ, ಆದ್ದರಿಂದ ಸೈತಾನನು ಆತನನ್ನು ಬಿಟ್ಟು ಹೊರಟುಹೋದನು. ಅಗ ದೇವದೂತರು ಬಂದು ಯೇಸುವಿಗೆ ಉಪಚಾರ ಮಾಡಿದರು.

தொடர்புடைய தகவல்கள்

ஜீவனுள்ள வார்த்தைகள் - இரட்சிப்பை பற்றியும் கிறிஸ்தவ ஜீவியத்தை பற்றியும் GRN ஆயிரக்கணக்கான மொழிகளில் வேதாகம செய்திகளை ஆடியோவில் சுவிஷேச செய்திகளாக கொண்டுள்ளது.

Choosing the audio or video format to download - What audio and video file formats are available from GRN, and which one is best to use?

Copyright and Licensing - GRN shares its audio, video and written scripts under Creative Commons